ಇಂದು ರಾಜ್ಯ ಬಜೆಟ್‌ ಮಂಡನೆ; ಬಸ್‌ ನಿಲ್ದಾಣಗಳಲ್ಲಿ ಬಜೆಟ್‌ ನೇರಪ್ರಸಾರ- ವೀಕ್ಷಣೆಗೆ ಅವಕಾಶ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ದಾಖಲೆಯ 17ನೇ ಬಜೆಟ್‌ ಮಂಡನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಸ್‌ ನಿಲ್ದಾಣಗಳಲ್ಲಿ ಬಜೆಟ್‌ ನೇರ ಪ್ರಸಾರವಿದ್ದು, ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.

ರಾಜ್ಯದ ಆಯ್ದ 230 ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ವಾರ್ತಾ & ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಡಿಜಿಟಲ್ ಡಿಸ್ಪ್ಲೆ, ಪರದೆಗಳ ಮೂಲಕ ಬಜೆಟ್ ನೇರ‌ ಪ್ರಸಾರ ಆಗಲಿದೆ.

ಬೆಂಗಳೂರಿನ 6 ಬಸ್ ನಿಲ್ದಾಣಗಳಲ್ಲಿ ಹಾಗೂ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರವಿದೆ.

Be the first to comment

Leave a Reply

Your email address will not be published. Required fields are marked *

ad image